ಯತೀಂದ್ರ ಹೇಳಿಕೆಗೆ ನೋ ರಿಯಾಕ್ಷನ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಸುಮ್ಮನಿದ್ದರೆ ನಾವು ಏನೆಂದು ತಿಳಿದುಕೊಳ್ಳಬೇಕು ಎಂದು ಗೃಹಮಂತ್ರಿ ಜಿ.ಪರಮೇಶ್ವರ್ ಪ್ರಶ್ನಿಸಿದರು.

ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಏನು ನಡೆದಿದೆ ಎಂಬುದುಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್‌ಗೆ ಮಾತ್ರ ಗೊತ್ತಿದೆ. ಹೈಕಮಾಂಡ್ ಸುಮ್ಮನಿದ್ರೆ ನಾವು ಏನೆಂದು ಅರ್ಥ ಮಾಡಿಕೊಳ್ಳಬೇಕು ಎಂದರು.

ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಪರಮೇಶ್ವರ್, ಅದು ಯತೀಂದ್ರ ಅವರ ವೈಯಕ್ತಿಕ ಹೇಳಿಕೆ. ನಾವು ಹೈಕಮಾಂಡ್ ಮೇಲೆ ಅವಲಂಬಿತರಾಗಿದ್ದೇವೆ. ಒಪ್ಪಂದಆಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿರಬಹುದು. ಅದು ಅವರ ಅಭಿಪ್ರಾಯ. ಅವರಿಗೆ ಗೊತ್ತಿರುವ ವಿಚಾರ ನಮಗೆ ಗೊತ್ತಿಲ್ಲ ಎಂದು ಹೇಳಿದರು.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮರುಸ್ಥಾಪಿಸಲಿ

ಹುಬ್ಬಳ್ಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮರು ಜಾರಿಗಾಗಿ ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ  ಯೋಜನೆ ಜಾರಿಗೆ ತಂದಿದ್ದರು. ಈಗಿನ ಕೇಂದ್ರದ ಬಿಜೆಪಿ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆ ಜಾರಿ ಮಾಡಿದೆ. ಇದರಿಂದ ಗ್ರಾಮೀಣ ಭಾಗದ ಜನರು ನಿರುದ್ಯೋಗಿಗಳಾಗಲಿದ್ದಾರೆ ಎಂದು ದೂರಿದರು.ಈ

ಯೋಜನೆಗೆ ಮೊದಲು ಕೇಂದ್ರಸರ್ಕಾರ ಶೇ. 90 ಅನುದಾನ ನೀಡುತ್ತಿದ್ದು, ಇದೀಗ ಅದನ್ನು ಶೇ.60ಕ್ಕೆ ಇಳಿಸಿ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಹಾಕಿದೆ. ಬಿಜೆಪಿಯವರು ಈ ಯೋಜನೆಗೆ ಧರ್ಮದ ಅರ್ಥ ಕಲ್ಪಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ನಾವು ಮನುಷ್ಯ ಧರ್ಮ ನಂಬಿದವರು. ಹೀಗಾಗಿ, ವಿಬಿ-ಜಿ ರಾಮ್ ಜಿ ವಿರುದ ಹೋರಾಟ ಗಟ್ಟಿಗೊಳಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮರುಸ್ಥಾಪನೆಗೆ ಒತ್ತಾಯಿಸಲಾಗುವುದು ಎಂದರು