ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮರುಸ್ಥಾಪಿಸಲಿ

ಹುಬ್ಬಳ್ಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮರು ಜಾರಿಗಾಗಿ ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ  ಯೋಜನೆ ಜಾರಿಗೆ ತಂದಿದ್ದರು. ಈಗಿನ ಕೇಂದ್ರದ ಬಿಜೆಪಿ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆ ಜಾರಿ ಮಾಡಿದೆ. ಇದರಿಂದ ಗ್ರಾಮೀಣ ಭಾಗದ ಜನರು ನಿರುದ್ಯೋಗಿಗಳಾಗಲಿದ್ದಾರೆ ಎಂದು ದೂರಿದರು.ಈ

ಯೋಜನೆಗೆ ಮೊದಲು ಕೇಂದ್ರಸರ್ಕಾರ ಶೇ. 90 ಅನುದಾನ ನೀಡುತ್ತಿದ್ದು, ಇದೀಗ ಅದನ್ನು ಶೇ.60ಕ್ಕೆ ಇಳಿಸಿ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಹಾಕಿದೆ. ಬಿಜೆಪಿಯವರು ಈ ಯೋಜನೆಗೆ ಧರ್ಮದ ಅರ್ಥ ಕಲ್ಪಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ನಾವು ಮನುಷ್ಯ ಧರ್ಮ ನಂಬಿದವರು. ಹೀಗಾಗಿ, ವಿಬಿ-ಜಿ ರಾಮ್ ಜಿ ವಿರುದ ಹೋರಾಟ ಗಟ್ಟಿಗೊಳಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮರುಸ್ಥಾಪನೆಗೆ ಒತ್ತಾಯಿಸಲಾಗುವುದು ಎಂದರು