ಯತೀಂದ್ರ ಹೇಳಿಕೆಗೆ ನೋ ರಿಯಾಕ್ಷನ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಸುಮ್ಮನಿದ್ದರೆ ನಾವು ಏನೆಂದು ತಿಳಿದುಕೊಳ್ಳಬೇಕು ಎಂದು ಗೃಹಮಂತ್ರಿ ಜಿ.ಪರಮೇಶ್ವರ್ ಪ್ರಶ್ನಿಸಿದರು.

ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಏನು ನಡೆದಿದೆ ಎಂಬುದುಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್‌ಗೆ ಮಾತ್ರ ಗೊತ್ತಿದೆ. ಹೈಕಮಾಂಡ್ ಸುಮ್ಮನಿದ್ರೆ ನಾವು ಏನೆಂದು ಅರ್ಥ ಮಾಡಿಕೊಳ್ಳಬೇಕು ಎಂದರು.

ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಪರಮೇಶ್ವರ್, ಅದು ಯತೀಂದ್ರ ಅವರ ವೈಯಕ್ತಿಕ ಹೇಳಿಕೆ. ನಾವು ಹೈಕಮಾಂಡ್ ಮೇಲೆ ಅವಲಂಬಿತರಾಗಿದ್ದೇವೆ. ಒಪ್ಪಂದಆಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿರಬಹುದು. ಅದು ಅವರ ಅಭಿಪ್ರಾಯ. ಅವರಿಗೆ ಗೊತ್ತಿರುವ ವಿಚಾರ ನಮಗೆ ಗೊತ್ತಿಲ್ಲ ಎಂದು ಹೇಳಿದರು.