ಸಿಎಂ ಕೊಟ್ಟ ಮಾತಿನಂತೆ ನಡೆಯಲಿದ್ದಾರೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಧಾನವಾಗಿಯಾದರೂ ಕೊಟ್ಟ ಮಾತಿನಂತೆ ನಡೆಯುತ್ತಾರೆ ಎನ್ನುವ ಭರವಸೆ ಇಂದಿಗೂ ಇದೆ. ಡಾ.ಯತೀಂದ್ರ ಸಿದ್ದ ರಾಮಯ್ಯ ಅವರ ಮಾತೇ ನಮಗೆ ವೇದ ವಾಕ್ಯ. ಅವರೇ ಹೈಕಮಾಂಡ್ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಯತೀಂದ್ರ ಅವರ ಹೇಳಿಕೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರಷ್ಟು ತಿಳಿವಳಿಕೆ ನಮಗಿಲ್ಲ ಎಂದು ವ್ಯಂಗ್ಯವಾಡಿದರು.